Monday, January 30, 2012

ಶಿಕಾರಿಪುರಕ್ಕೆ ರೈಲು


ಶಿವಮೊಗ್ಗ ಜಿಲ್ಲೆಯ ಶಿಕಾರಿಪುರಕ್ಕೆ, ಅದರಲ್ಲೂ ಯಡಿಯೂರಪ್ಪನವರ ಸ್ವಕ್ಷೇತ್ರಕ್ಕೆ ಸದ್ಯದಲ್ಲೇ ರೈಲು ಸಂಪರ್ಕ ಕಲ್ಪಿಸಲಾಗುವುದು ಎಂದು ಸಂಸದ ಹಾಗೂ ಯಡಿಯೂರಪ್ಪ ಪುತ್ರ ರಾಘವೇಂದ್ರ ಭರವಸೆ ನೀಡಿದ್ದಾರೆ. ಮೊನ್ನೆ ನಡೆದ ಕಾರ್ಯಕ್ರಮವೊಂದರಲ್ಲಿ ಈ ಮಾತನ್ನು ಆಡಿದ್ದಾರೆ. ಇದು ನಿಜಕ್ಕೂ ಹರ್ಷದಾಯಕ ಸಂಗತಿಯಾಗಿದೆ. ಶಿವಮೊಗ್ಗದಿಂದ ಶಿಕಾರಿಪುರ ಮಾರ್ಗವಾಗಿ ಹಾವೇರಿ ಜಿಲ್ಲೆಯ ರಾಣಿಬೆನ್ನೂರಿಗೆ ಸಂಪರ್ಕ ಕಲ್ಪಿಸುವುದಾಗಿ ತಿಳಿಸಿದ್ದಾರೆ. ಈಗಾಗಲೇ ಶಿಕಾರಿಪುರ ಜಿಲ್ಲೆಯ ಮಾದರಿಯಲ್ಲಿ ಅಭಿವೃದ್ದಿಯಾಗಿದೆ. ಎಲ್ಲಾ ಕಡೆಯಲ್ಲೂ ಸಿಮೆಂಟ್ ರಸ್ತೆ, ಹಲವಾರು ಶಾಲೆಗಳು, ವಸತಿ ನಿಲಯಗಳು ಸೇರಿದಂತೆ ವಿವಿಧ ಅಭಿವೃದ್ದಿ ಕಾಮಗಾರಿಗಳು ಯಡಿಯೂರಪ್ಪ ಅವಧಿಯಲ್ಲಿ ಆಗಿದ್ದು, ಇದೊಂದು ಉತ್ತಮ ಬೆಳವಣಿಗೆಯಾಗಿದೆ ಎನ್ನುವ ಮಾತುಗಳು ಎಲ್ಲೆಡೆ ಕೇಳಿ ಬರುತ್ತಿದೆ.